ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ ಹಾಗೂ ದೇಶದ ಇತರೆ ಕಡೆಗಳಲ್ಲಿ ಜಿರಳೆಗಳು ಅಲಿಯಾಸ್ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಪ್ರತಿಭಟನೆಯ ಸಂದರ್ಭ ದೆಹಲಿಯ ಪೊಲೀಸ್ ನಡೆಸಿರುವ ಲಾಠಿ ಪ್ರಹಾರ ಖಂಡಿಸಿ ತಾಲ್ಲೂಕು ಕಚೇರಿ ಮುಂಭಾಗ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಅಹಿಂದ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಸಚಿನ್ ಗರಗ ಹಾಗೂ ಕಾರ್ಯಾಧ್ಯಕ್ಷ ರಹಮತ್ ಉಲ್ಲಾ ಅಸಾದಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಎಂದರೆ ದೇಶದ ಭವಿಷ್ಯ ಎಂಬುದನ್ನು ಮರೆತು ದೆಹಲಿ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಟಿಯರ್ ಗ್ಯಾಸ್, ವಾಟರ್ ಗನ್ ಬಳಸಿ ವಿದ್ಯಾರ್ಥಿ ಸಮೂಹವನ್ನು ಅಪರಾಧಿಗಳಂತೆ ಟ್ರೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ಹಿಂಸಾ ಮಾರ್ಗವನ್ನು ಅನುಸರಿಸಿರುವುದು ಅಮಾನವೀಯ ನಡೆಯಾಗಿದೆ. ದೇಶದ ಭವಿಷ್ಯದ ಪ್ರಜೆಗಳು, ಪುಟಾಣಿ ಮಕ್ಕಳನ್ನು ಪೊಲೀಸರು ಹೊಡೆದು ಏನನ್ನು ಸಾಧಿಸಲು ಹೊರಟಿದ್ದಾರೆ. ನಾವು ಇದನ್ನು ಖಂಡಿಸುವ ಸಲುವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ದೆಹಲಿಗೆ ಹೋಗಲು ಆಗದೆ ಇಲ್ಲಿಯೇ ಪ್ರತಿಭಟನೆಗೆ ಬೆಂಬಲ ನೀಡುವ ಎಲ್ಲಾ ನಾಗರೀಕರು ತಾಲ್ಲೂಕು ಕಚೇರಿ ಮುಂಭಾಗ ಬನ್ನಿ ಎಂದು ಕರೆ ನೀಡಿದ್ದಾರೆ.