ಆಗುಂಬೆ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಣ್ಣ
ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಶಿವಣ್ಣ (52) ತೀವ್ರ ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ. ಆಗುಂಬೆಯಲ್ಲಿ ಹೃದಯಾಘಾತ ಸಂಭಿಸಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಎತ್ತರವಿದ್ದ ಶಿವಣ್ಣ ಬಹಳ ಚಿರಪರಿಚಿತರಾಗಿದ್ದರು. ಯೌವನದಲ್ಲಿ ಗಲಾಟೆ, ದೊಂಬಿಯಂತಹ ಪ್ರಕರಣದಲ್ಲಿ ಒಬ್ಬರೇ ಏಕಾಂಗಿಯಾಗಿ ಗಲಾಟೆ ಹದ್ದುಬಸ್ತಿಗೆ ತರುತ್ತಿದ್ದರು. ಅವರಿಗೆ ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳು ಇದ್ದಾರೆ.