ಪರಿಶ್ರಮದ ಬದುಕು ಕಟ್ಟಿಕೊಳ್ಳುತ್ತಿದ್ದ ಛಲಗಾತಿ ಮಹಿಳೆ
ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯ ಸ್ವಚ್ಚತಾ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ಷಾಲಕೊಪ್ಪ ನಿವಾಸಿ ರೇಖಾ ವೆಂಕಟೇಶ್ ಮಂಗಳವಾರ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಾತ್ರೆ, ಹಬ್ಬ, ಇನ್ನಿತರ ಸಮಾರಂಭದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಅಲ್ಲದೆ ಸಾಮಾಜಿಕ ಹೋರಾಟಗಳಲ್ಲಿಯೂ ಭಾಗವಹಿಸುತ್ತಿದ್ದ ಅವರು ಎಂತಹ ಕಷ್ಟದ ಸಂದರ್ಭದಲ್ಲಿಯೂ ಎದೆಗುಂದದೆ ಮುನ್ನುಗ್ಗುತ್ತಿದ್ದರು.
ಪತಿ ವೆಂಕಟೇಶ್ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
