ಹೊನ್ನೇತ್ತಾಳು ಶಾಲೆಗೆ 1.2 ಲಕ್ಷ ದೇಣಿಗೆ ನೀಡಿದ ಚೇತನಾ

ಪುತ್ರನ ಹುಟ್ಟುಹಬ್ಬದ ಸಂತೋಷಕ್ಕಾಗಿ ಕೊಡುಗೆ
ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ದಾನ‌ ನೀಡಿದ ಪೋಷಕಿ
ತೀರ್ಥಹಳ್ಳಿಯ ಹೊನ್ನೇತ್ತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಪೋಷಕರೊಬ್ಬರು 1.2 ಲಕ್ಷ ದೇಣಿಗೆ ನೀಡುವ ಮೂಲಕ ಪುತ್ರನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ಇದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ಹೇಮಾವತಿ ಮತ್ತು ಮನಸಗಾರ್‌ ಟೀಕಪ್ಪ ಗೌಡ ದಂಪತಿಯ ಪುತ್ರಿ ಚೇತನಾ ರಾಜಶೇಖ‌ರ್ ದೇಣಿಗೆ ನೀಡಿದವರು. ಇವರ ಪುತ್ರ ಸಾಯಿ ಸೂರ್ಯ ಬೆಂಗಳೂರಿನಲ್ಲಿ ಪ್ರೀ ಕೆಜಿ ಕಲಿಯುತ್ತಿದ್ದಾನೆ.

1.2 ಲಕ್ಷವನ್ನು ಠೇವಣಿ ಇಟ್ಟು, ಅದರಿಂದ ಬಂದ ಬಡ್ಡಿಯನ್ನು ಬಡ ಮಕ್ಕಳ ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಮೊದಲು ಸರಳವಾಗಿ ವಿವಾಹವಾಗಿ ಉಳಿತಾಯದ ಹಣದಲ್ಲಿ ಶಾಲೆಯ ಅಭಿವೃದ್ಧಿಗೆ ಚೇತನಾ 50,000 ದೇಣಿಗೆ ನೀಡಿದ್ದರು.

ಮುಖ್ಯ ಶಿಕ್ಷಕಿ ಅಶ್ವಿನಿ ಎಚ್.ಎಸ್., ಸಹ ಶಿಕ್ಷಕಿ ಮಹದೇವಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಎ.ಜಿ.ನಿತ್ಯಾನಂದ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post