ಮಲ್ಲಂದೂರು ಸಂಪರ್ಕದ ರಸ್ತೆ ಹೊಂಡ ಗುಂಡಿ ಮುಚ್ಚಿದ ಯುವಕರು

ಬರ್ಕಣ ಫಾಲ್ಸ್, ಜೋಗಿಗುಂಡಿ ಪ್ರವಾಸಿಗರಿಗೆ ಅನುಕೂಲ
ಆಗುಂಬೆ ಸಮೀಪದ ಮಲ್ಲಂದೂರು ಗ್ರಾಮದ ಬಳಿಯ ಬರ್ಕಣ ಫಾಲ್ಸ್ ಹಾಗೂ ಜೋಗಿಗುಂಡಿ ಕಡೆಗೆ ತೆರಳುವ ರಸ್ತೆಯಲ್ಲಿ ದೊಡ್ಡ ಹೊಂಡಗಳು ಉಂಟಾಗಿ, ರಸ್ತೆ ಸಂಚಾರಕ್ಕೆ ತುಂಬಾ ಅನಾನುಕೂಲವಾಗಿತ್ತು.

ಪ್ರಕೃತಿ ಸೌಂದರ್ಯವನ್ನು ಸವಿಯಲು ದೂರದ ಊರುಗಳಿಂದ ಬರುವ ಪ್ರವಾಸಿಗರಿಗೆ ಈ ರಸ್ತೆಯ ಸ್ಥಿತಿ ತೊಂದರೆ ಮಾತ್ರವಲ್ಲದೆ, ವಾಹನ ಸವಾರರಿಗೆ ಅಪಾಯಕಾರಿಯಾಗುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.

ಈ ಸಮಸ್ಯೆಯನ್ನು ಗಮನಿಸಿದ ಮಲ್ಲಂದೂರಿನ ಯುವಕರಾದ ಮಿಲನ್, ಅಭಿಷೇಕ್, ಅಶ್ವಥ್ ಹಾಗೂ ಅವಿನ್ ಸ್ವಯಂ ಪ್ರೇರಿತರಾಗಿ ಸೇರಿ, ಹೊಂಡಗಳಿಗೆ ಕಲ್ಲುಗಳನ್ನು ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ಓಡಾಡಲು ಅನುಕೂಲವಾಗುವಂತೆ ಮಾಡಿದ್ದಾರೆ.

ಮಳೆಗಾಲದಲ್ಲಿ ಈ ರಸ್ತೆಯ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು ಗುಂಡಿಯಲ್ಲಿ ನೀರು ತುಂಬಿದರೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ ರಸ್ತೆ ನಿರ್ಮಿಸಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post