ಸಾಧನೆಗೆ ಬಡತನ ಅಡ್ಡಿಯಲ್ಲ - ಎಸ್.ರತ್ನಕುಮಾರಿ
ಸಾಧನೆಗೆ ಬಡತನ ಅಡ್ದಿಯಲ್ಲ, ಸ್ಪಷ್ಟ ಗುರಿ ಹಾಗೂ ಶೃದ್ದೆಯಿಂದ ಅಭ್ಯಾಸ ಮಾಡಿದರೆ ಶಿಕ್ಷಣ ಯಾರನ್ನೂ ದೂರ ಮಾಡುವುದಿಲ್ಲ ಎಂದು ರಾಷ್ಟಿಯ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್ ರತ್ನಕುಮಾರಿ ಹೇಳಿದ್ದಾರೆ
ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸಾಂಸ್ಕೃತಿಕ ವೇದಿಕೆ ಹಾಗೂ ಇತರೆ ವೇದಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು ಬಡತನವೆ ನನಗೆ ಶಿಕ್ಷಕಿ ಆಗಲು ಪ್ರೇರಣೆ ನೀಡಿತು. ಅಂದು ಪಾಠ ಮಾಡಿದ ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಿದರು. ಗುರು ಮತ್ತು ಗುರಿ ಇದ್ದಾಗ ಸಾಧನೆ ಕಷ್ಟವಲ್ಲ ಎಂದರು.
ಲೇಖಕಿ ದೀಪಾ ಹಿರೇಗುತ್ತಿ ಕಾಲೇಜಿನಲ್ಲಿ ವಿವಿಧ ಸೃಜನ ಶೀಲ ವೇದಿಕೆಗಳಿದ್ದು, ಇವುಗಳ ಮೂಲಕ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ಕ್ರೀಡೆ, ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್ ಹಾಗೂ ಇತರೆ ಚಟುವಟಿಕೆಗಳನ್ನು ನಿಮ್ಮನ್ನು ಗುರುತಿಸಲು ಸೂಕ್ತವಾದ ವೇದಿಕೆಗಳಿವೆ ಅವುಗಳನ್ನು ಬಳಸಿಕೊಂಡು ಅತ್ಮವಿಶ್ವಾಸ ಬೆಳಸಿಕೊಳ್ಳಬೇಕು. ಸಾಧನೆ ಮಾಡಿದ ಸಾಧಕರೆಲ್ಲರೂ ನಿಮ್ಮ ಹಾಗೆ ತರಗತಿಯಲ್ಲಿ ವಿದ್ಯಾರ್ಥಿಗಳಾಗಿದ್ದು, ಅವರು ಕೂಡ ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಿ ಯಶಸ್ಸಿನ ಮೆಟ್ಟಿಲನ್ನು ಏರಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಅಬ್ದುಲ್ ರೆಹಮಾನ್ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ 25000 ರೂಗಳ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳಿಗೆ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ರ್ಯಾಂಕ್ ಪಡೆದ 4 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸೌಮ್ಯ ಕೆ.ಸಿ. ವಹಿಸಿದ್ದರು.
ಐಕ್ಯೂಎಸಿ ಸಂಚಾಲಕ ಡಾ. ಗಣಪತಿ ಹೆಚ್. ಎ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಕೃಷ್ಣಮೂರ್ತಿ ಕೆ ಸರ್ವರನ್ನು ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.